ಈ ಕುರಿತು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ಮಾರಕ ಭವನದ ಸದಸ್ಯ ಪಿ. ರಾಮಯ್ಯ, ‘ನವೆಂಬರ್ 5ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯುವ ಕೆ.ಕೆ. ಸ್ಮಾರಕ ಸಂಗೀತ ಉತ್ಸವ ಸಮಾರೋಪ ಸಮಾರಂಭದಲ್ಲಿ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಜಿ.ಕೆ. ವೀರೇಶ್ ಅವರು ಗೋಡ್ಖಿಂಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ₹2 ಲಕ್ಷ ನಗದು, ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆಯನ್ನು ಒಳಗೊಂಡಿದೆ’ ಎಂದರು.