ವಿರೋಧ ಪಕ್ಷಗಳ ಸಮನ್ವಯ ಸಮಿತಿಯು ಪಾರ್ಲಿಮೆಂಟ್ ಹೌಸ್ನಲ್ಲಿ ಸೋಮವಾರ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರು, ‘ನೊಟು ರದ್ದತಿಯು ಎನ್ಡಿಎ ಸರ್ಕಾರದ ಅಸಮರ್ಪಕ ಗ್ರಹಿಕೆಯ ಮತ್ತು ಆತುರದ ನಿರ್ಧಾರ. ಇದೊಂದು ಹಗರಣ ಎಂದೇ ಹೇಳಬೇಕು’ ಎಂದು ಟೀಕಿಸಿದ್ದಾರೆ.