‘ಈ ಅಕ್ರಮದ ಬಗ್ಗೆ ರಾಜ್ಯಪಾಲ, ಲೋಕಾಯುಕ್ತ, ಜಿಲ್ಲಾಧಿಕಾರಿ, ಬಿಎಂಟಿಎಫ್ ಮುಖ್ಯಸ್ಥರಿಗೆ 10 ವರ್ಷಗಳ ಹಿಂದೆಯೇ ದೂರು ಸಲ್ಲಿಸಲಾಗಿತ್ತು. ಅವರು ಅಕ್ರಮ ಬಯಲಿಗೆಳೆಯಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಜಾಗ ಮಂಜೂರಾತಿ ಮಾಡಿಸಿಕೊಂಡಿರುವ ವ್ಯಕ್ತಿಗಳ ಸಂಪೂರ್ಣ ವಿವರ ಬಹಿರಂಗಪಡಿಸಬೇಕು. ಜತೆಗೆ ಈ ಜಾಗವನ್ನು ವಸತಿರಹಿತರಿಗೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.