ಬೆನಕಟ್ಟಿ (ತಾ.ಸವದತ್ತಿ): ಜನತೆಗೆ ಸರ್ಕಾರದ ಸೌಲಭ್ಯಗಳನ್ನು ಕೊಡಿಸುವ ಮೂಲಕ ಪ್ರಾಮಾಣಿಕ ಕೆಲಸ ಮಾಡಿದ್ದೇನೆ ಎಂದು ಶಾಸಕ ಆನಂದ ಮಾಮನಿ ಹೇಳಿದರು. ಅವರು ಸೋಮವಾರ ಸಂಜೆ ಮದ್ಲೂರ ಶ್ರೀಕೃಷ್ಣ ದೇವಸ್ಥಾನದ ಹತ್ತಿರ ಸಮುದಾಯ ಭವನ, ಪಾಂಜಾ ಮಸೀದಿ ಹತ್ತಿರ ಸಮುದಾಯ ಭವನದ ಅಡಿಗಲ್ಲು ಪೂಜೆ, ಚಂದ್ರಮಾ ಗ್ರಾಮೀಣ ಅಭಿವೃದ್ಧಿ ಸಹಕಾರಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.