ಮೊಳಕಾಲ್ಮುರು ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ನೀರಿನಲ್ಲಿ ಮೃತಪಟ್ಟ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಅನಾಹುತ ಮಾಡಿಕೊಂಡ ಘಟನೆಗಳು ಸಾಕಷ್ಟು ನಡೆದಿವೆ. 6–7 ವರ್ಷ ನಂತರ ಈ ಬಾರಿ ಉತ್ತಮ ಮಳೆಯಾಗಿದ್ದು, ಕೆರೆ, ಕಟ್ಟೆ, ಚೆಕ್ಡ್ಯಾಂಗಳಲ್ಲಿ ನೀರು ತುಂಬಿಕೊಂಡಿದೆ. ಸಹಜವಾಗಿಯೇ ಮಕ್ಕಳು ಖುಷಿಗಾಗಿ ನೀರಿನಲ್ಲಿ ಆಟವಾಡಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿದರು.