ಬುಧವಾರ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಕೋವಿಂದ್, ‘ಟಿಪ್ಪು ಅಪ್ರತಿಮ ವೀರನಾಗಿದ್ದ. ಸೇನೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದ್ದ’ ಎಂದು ಹೇಳಿದ್ದಾರೆ.
‘ಬ್ರಿಟಿಷರ ವಿರುದ್ದ ಹೋರಾಡಿ ವೀರಮರಣವನ್ನು ಅಪ್ಪಿದ ಟಿಪ್ಪು ಸುಲ್ತಾನ್ ಅವರು ನಾಡಿನ ಅಭಿವೃದ್ಧಿಯ ಪಥ ಬದಲಿಸಿ ಮುಂಚೂಣಿ ನೇತಾರ. ಯುದ್ಧಭೂಮಿಯಲ್ಲಿ ಮೈಸೂರು ರಾಕೆಟ್ ಬಳಸಿದ ಅಪ್ರತಿಮ ನಾಯಕ. ಟಿಪ್ಪು ರೂಪಿಸಿದ್ದ ರಾಕೆಟ್ ತಂತ್ರಜ್ಞಾನವನ್ನು ಯುರೋಪಿಯನ್ನರು ನಂತರ ಬಳಸಿಕೊಂಡರು’ ಎಂದು ಕೋವಿಂದ್ ಹೇಳಿದರು.