ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ ಮುಖ್ಯ ಅತಿಥಿಯಾಗಿದ್ದರು. ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ, ಉಪಾ ಧ್ಯಕ್ಷೆ ಸುನೀತಾ ಆಚಾರ್, ಉದ್ಯಮಿ ಪ್ರಖ್ಯಾತ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಧನಂಜಯ ಕುಮಾರ್, ಭೂನ್ಯಾಯಮಂಡಳಿ ಸದಸ್ಯ ಪೃಥ್ವಿರಾಜ್ ಶೆಟ್ಡಿ, ತೆಂಕನಿಡಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ದಯಾನಂದಶೆಟ್ಟಿ, ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ವಿಜಯಲಕ್ಷ್ಮೀ ಬಿ.ನಾಯಕ್, ಗರಡಿಮಜಲು ಶಾಲೆಯ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಕೊಟ್ಯಾನ್ ಮತ್ತು ಮುಖ್ಯೋಪಾಧ್ಯಾಯಿನಿ ರತ್ನಾ ಇದ್ದರು.
ಶಿಬಿರದ ಅಧಿಕಾರಿ ಎಚ್.ಎಂ. ಅನುರಾಧ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದ ನಾಯಕರಾದ ನಾಗರಾಜ್ ಮತ್ತು ಎನ್.ಬಿ. ಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಸಹಶಿಬಿರದ ಅಧಿಕಾರಿ ಕಿರಣರಾಮ್ ವಝೆ ವಂದಿಸಿದರು.