ಇಲ್ಲಿನ ಬಿಎಸ್ಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಮಾಯಾವತಿ ಹಿಂದೂ ಧರ್ಮದಲ್ಲಿನ ತಾರತಮ್ಯ ನೀತಿಗೆ ಬೇಸತ್ತು ಅಂಬೇಡ್ಕರ್ ಅವರು ಬೌದ್ಧ ಧರ್ಮ ಸೇರಿದರು. ತಾರತಮ್ಯ ನೀತಿ ಮುಂದುವರೆದಲ್ಲಿ ಅವರಂತೆ ನಾನು ಕೂಡ ಬೌದ್ಧ ಧರ್ಮ ಸೇರುವುದಾಗಿ ಮಾಯಾವತಿ ಎಚ್ಚರಿಕೆ ನೀಡಿದರು. ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರ ಮೌಡ್ಯ ಆಚರಣೆಗಳು ಮತ್ತು ಪೌರೋಹಿತ್ಯಕ್ಕೆ ಬೆಂಬಲ ನೀಡುತ್ತಿದ್ದು, ದಲಿತರು ಮತ್ತು ಹಿಂದುಳಿದವರನ್ನು ಕಡೆಗಣಿಸಲಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ಬೆಂಬಲಿಗರೊಂದಿಗೆ ಬೌದ್ಧ ಧರ್ಮ ಸೇರುತ್ತೇನೆ ಎಂದು ಮಾಯಾವತಿ ತಿಳಿಸಿದರು.