ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊಲೂರು ಮಲ್ಲಪ್ಪ ಯುವಕರಿಗೆ ಮಾದರಿ’

Last Updated 25 ಅಕ್ಟೋಬರ್ 2017, 9:49 IST
ಅಕ್ಷರ ಗಾತ್ರ

ಯಾದಗಿರಿ: ‘ಆದರ್ಶ ಜೀವನ ನಡೆಸುವ ಮೂಲಕ ಕೊಲ್ಲೂರ ಮಲ್ಲಪ್ಪನವರು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ’ ಎಂದು ಕೊಲೂರು ಮಲ್ಲಪ್ಪ ಮೆಮೋರಿಯಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀಶೈಲ ಪೂಜಾರಿ ಹೇಳಿದರು.

ನಗರದಲ್ಲಿ ಮಂಗಳವಾರ ಕೊಲೂರು ಮಲ್ಲಪ್ಪ ಮೆಮೋರಿಯಲ್  ಶಿಕ್ಷಣ ಸಂಸ್ಥೆ ವತಿಯಿಂದ ಕೊಲೂರು ಮಲ್ಲಪ್ಪ ಅವರ 13ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ಹೈದರಾಬಾದ್ ಕರ್ನಾಟಕದ ಗಾಂಧಿ ಎಂದೇ ಚಿರಪರಿಚಿತರಾಗಿದ್ದ ಮಲ್ಲಪ್ಪನವರು ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಒಲಿದು ಬಂದರೂ, ಅದನ್ನು ನಯವಾಗಿ ನಿರಾಕರಿಸಿದ ಮಹಾನ್ ವ್ಯಕ್ತಿಯಾಗಿದ್ದರು. ಅವರ ಸ್ವಚಾರಿತ್ರ್ಯವನ್ನು ಇಂದಿನ ಯುವಕರು ಅನುಸರಿಸಬೇಕು’ ಎಂದು ಕರೆ ನೀಡಿದರು.

ನಗರಸಭೆ ಸದಸ್ಯ ಶಶಿಧರರೆಡ್ಡಿ ಹೊಸಳ್ಳಿ ಮಾತನಾಡಿ, ‘ಮಲ್ಲಪ್ಪನವರು ಕುಷ್ಠರೋಗಿಗಳಿಗಾಗಿ ಮಾಡಿದ ಸೇವೆ, ಹೈದರಾಬಾದ್‌ ಕರ್ನಾಟಕ ವಿಮೋಚನೆಗೆ ಅವರ ಹೋರಾಟದ ಕೊಡುಗೆ ಅಪಾರವಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT