ಬೆಂಗಳೂರು: ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲೆಂಡ್ (ಆರ್ಬಿಎಸ್) ನೀಡುವ ‘ಆರ್ಬಿಎಸ್ ಅರ್ಥ್ ಹೀರೋಸ್’ ಪ್ರಶಸ್ತಿಗೆ ಉತ್ತರ ಕನ್ನಡದ ಕಾಳಿ ಹುಲಿ ಅಭಯಾರಣ್ಯದ ಉಪ ವಲಯ ಅರಣ್ಯಾಧಿಕಾರಿ ಚಂದ್ರಕಾಂತ ನಾಯ್ಕ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿ ₹2 ಲಕ್ಷ ನಗದು ಒಳಗೊಂಡಿದೆ. ನವದೆಹಲಿಯಲ್ಲಿ ಗುರುವಾರ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕುಳಗಿ, ಕುಂಬಾರವಾಡಾ ವನ್ಯಜೀವಿ ವಲಯದಲ್ಲಿ ಕಳ್ಳಬೇಟೆ ಹಾಗೂ ಮರದ ಮಾಫಿಯಾಕ್ಕೆ ಅವರು ಕಡಿವಾಣ ಹಾಕಿದ್ದರು. ಚಿಮ್ಮುವ ಕಪ್ಪೆಯ ಹೊಸ ಪ್ರಭೇದವು ಕುಮಟಾ ತಾಲ್ಲೂಕಿನ ಸಾಣಿಕಟ್ಟದಲ್ಲಿ 2015ರಲ್ಲಿ ಬಾರಿ ಕಂಡುಬಂದಿತ್ತು. ಇದರ ಪತ್ತೆಯಲ್ಲಿ ನಾಯ್ಕ್ ಅವರು ಮಹತ್ತರ ಪಾತ್ರ ವಹಿಸಿದ್ದರು.