ಬೆಂಗಳೂರು: ‘ವಿಧಾನಸೌಧ ವಜ್ರಮಹೋತ್ಸವ ಮಾದರಿಯ ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರ ತೆರಿಗೆ ಹಣ ವ್ಯಯಿಸಲು ನಿರ್ಬಂಧ ಹೇರುವಂತಹ ಕಾನೂನು ಎಲ್ಲಿದೆ’ ಎಂದು ಹೈಕೋರ್ಟ್ ಪ್ರಶ್ನಿಸಿದೆ.
ವಜ್ರಮಹೋತ್ಸವ ಆಚರಣೆ ತಡೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.