ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮೀನು ಷರತ್ತು ಸಡಿಲಿಕೆ ಕುಮಾರಸ್ವಾಮಿ ಅರ್ಜಿ

Last Updated 25 ಅಕ್ಟೋಬರ್ 2017, 20:21 IST
ಅಕ್ಷರ ಗಾತ್ರ

ಬೆಂಗಳೂರು:  ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಮ್ಮ ನಿರೀಕ್ಷಣಾ ಜಾಮೀನಿನ ಷರತ್ತು ಸಡಿಲಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಈ ಮೊದಲು ನಿಮಗೆ ನಿರೀಕ್ಷಣಾ ಜಾಮೀನು ನೀಡಿರುವ ನ್ಯಾಯಮೂರ್ತಿ ರತ್ನಕಲಾ ಅವರಿ ನ್ಯಾಯಪೀಠದ ಮುಂದೆಯೇ ಈ ಅರ್ಜಿಯನ್ನೂ ಸಲ್ಲಿಸಿ’ ಎಂದು ಬೂದಿಹಾಳ್‌ ಸೂಚಿಸಿದರು.

‘ನಾನು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದ್ದರಿಂದ 15 ದಿನಗಳಿಗೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ವಿಧಿಸಲಾಗಿರುವ ಷರತ್ತು ಸಡಿಸಲಬೇಕು’ ಎಂದು ಕೋರಿ ಕುಮಾರಸ್ವಾಮಿ ಈ ಅರ್ಜಿ ಸಲ್ಲಿಸಿದ್ದಾರೆ.

ಜಂತಕಲ್ ಮೈನಿಂಗ್ ಕಂಪೆನಿಗೆ ಗಣಿ ಪರವಾನಗಿ ನೀಡುವಂತೆ ಐಎಎಸ್ ಅಧಿಕಾರಿ ಮೇಲೆ ಒತ್ತಡ ಹೇರಿದ ಆರೋಪವನ್ನು ಕುಮಾರಸ್ವಾಮಿ
ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT