‘ಬೊಮ್ಮನಹಳ್ಳಿ ವಲಯ ನಿಯಂತ್ರಣ ಕೊಠಡಿಗೆ ಮಂಗಳವಾರ ಮಧ್ಯರಾತ್ರಿ ದಿಢೀರ್ ಭೇಟಿ ನೀಡಿದಾಗ ಒಬ್ಬ ಹಿರಿಯ ಅಧಿಕಾರಿಯೂ ಇರಲಿಲ್ಲ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಪ್ರಸಾದ್, ಸಹಾಯಕ ಎಂಜಿನಿಯರ್ ಕುಮಾರ್, ಆರೋಗ್ಯಾಧಿಕಾರಿ ಮಹೇಶ್ ಗೈರಾಗಿದ್ದರು. ಒಂದು ತಾಸು ಕಾದರೂ ಪತ್ತೆ ಇಲ್ಲ. ಆದರೆ, ಹಾಜರಾತಿ ಪುಸ್ತಕದಲ್ಲಿ ರಾಮಪ್ರಸಾದ್ ಅವರ ಸಹಿ ಇತ್ತು. ಮೂವರಿಗೂ ಷೋಕಾಸ್ ನೋಟಿಸ್ ಜಾರಿಗೊಳಿಸಲು ವಲಯ ಜಂಟಿ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದರು.