‘ದೇಶದಲ್ಲಿ ಶೇ 3ರಷ್ಟು ಜನರು ಗೀಳು ಬೇನೆಯಿಂದ ಬಳಲುತ್ತಿದ್ದಾರೆ. 15 ರಿಂದ 30 ವಯಸ್ಸಿನವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಒಸಿಡಿ ಸಂಬಂಧಿತ ಅನೇಕ ಸಂಶೋಧನೆಗಳು ನಡೆದಿವೆ. ಈ ರೋಗಿಗಳಿಗೆ ಮಾತ್ರೆಗಳು ಹಾಗೂ ವಿವಿಧ ಬಗೆಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಮೆದುಳಿನ ಶಸ್ತ್ರ ಚಿಕಿತ್ಸೆ ಮೂಲಕ ಗುಣಪಡಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.