ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ, ಬೆಂಬಲ ಬೆಲೆ ನಿಗದಿ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣದಿಂದಾಗಿ ಕೃಷಿ ಕ್ಷೇತ್ರ ತುಂಬಾ ತೊಂದರೆಯಲ್ಲಿದೆ. ಜಿಪಿಡಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದ ಕೃಷಿಕ್ಷೇತ್ರ ಈಗ ಕೊನೆ ಸ್ಥಾನಕ್ಕೆ ಬಂದಿದೆ. ರಾಷ್ಟ್ರ ಮಟ್ಟದಲ್ಲಿ ಕೃಷಿ ಅವಲಂಭಿತರ ಸಂಖ್ಯೆ ಶೇ 53ಕ್ಕೆ ಇಳಿಕೆಯಾಗಿದೆ. ಇದು ರಾಜ್ಯದಲ್ಲಿ ಶೇ 49ರಷ್ಟಿದೆ ಎಂದು ಹೇಳಿದರು.