ಸ್ವಾಮೀಜಿ ಮಹಿಳೆಯೊಬ್ಬರ ಜತೆ ರಾಸಲೀಲೆಯಲ್ಲಿ ತೊಡಗಿದ್ದಾರೆ ಎನ್ನಲಾದ ದೃಶ್ಯಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿದ್ದವು. ಸುದ್ದಿ ತಿಳಿದು ಮಠದ ಎದುರು ಜಮಾಯಿಸಿದ ಗ್ರಾಮಸ್ಥರು ಹಾಗೂ ಭಕ್ತರು ಮಠದೊಳಕ್ಕೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಇದರಿಂದ ಭಕ್ತರು ಮತ್ತು ಪೊಲೀಸರ ನಡುವೆ ವಾಗ್ದಾದ ನಡೆಯಿತು.