ರಾಮನಗರ: ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಪರದಾಡತೊಡಗಿದ್ದಾರೆ.
ತಾಲ್ಲೂಕು ಆಡಳಿತವು ವಿದ್ಯುತ್ ಬಿಲ್ ಪಾವತಿಸದ ಕಾರಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.
ಇದರಿಂದಾಗಿ ಪಹಣಿ, ಭೂದಾಖಲಾತಿಗಳು, ಸಕಾಲ ಸೇವೆಗಳು ಸೇರಿದಂತೆ ಹಲವು ಸೇವೆಗಳು ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿವೆ. ಇದರಿಂದಾಗಿ ನೂರಾರು ಜನರು ಪರದಾಡುತ್ತಿದ್ದಾರೆ.