ಏಳು ಜಿಲ್ಲೆಗಳಲ್ಲಿ 2.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಜೋಳಕ್ಕೆ ಕೀಟಬಾಧೆ ತಗುಲಿದೆ. ಕ್ವಿಂಟಲ್ಗೆ ₹ 1800 ಬೆಂಬಲ ಬೆಲೆ ನಿಗದಿ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಪರಸ್ಪರ ಆರೋಪ ಬಿಟ್ಟು ಎಕರೆಗೆ ಇಂತಿಷ್ಟು ಪರಿಹಾರ ನೀಡಬೇಕು. ಈ ಸಂಬಂಧ ಖುದ್ದು ಪ್ರಧಾನಿ, ಮುಖ್ಯಮಂತ್ರಿಗೆ ಮನವರಿಕೆ ಮಾಡಲಾಗುವುದು. ಬೆಂಬಲ ಬೆಲೆಯಲ್ಲಿ ಖರೀದಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.