ನ.13ರಂದು ಕಾವೇರಿ ನದಿ ಬಂಗಾಳಕೊಲ್ಲಿ ಸೇರುವ ತಮಿಳುನಾಡಿನ ಪೂಂಪುಹಾರ್ಗೆ ಈ ಯಾತ್ರೆ ತಲುಪಲಿದ್ದು, ಅಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು’ ಎಂದು ಹೇಳಿದರು. ತಿ. ನರಸೀಪುರದ ಮಾತೆ ವೇದವಲ್ಲಿ, ರಾಜೇಶ್ವರಾನಂದ ಸ್ವಾಮೀಜಿ, ಕೊಡಗಿನ ಚಂದ್ರಮೋಹನ್, ತಮಿಳುನಾಡಿನ ಕಾಳೇಶ್ವರ ಸ್ವಾಮೀಜಿ ಸೇರಿದಂತೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ ಸಾಧುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.