ಬಾಳೆಹೊನ್ನಿಗ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಕುಮಾರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಶಂಕರ್, ಸುಂದರ್ರಾಜ್, ಬಾಳೆಹೊನ್ನಿಗ ಗ್ರಾಮದ ವಾಸಿ ಶಂಕರ, ಎಚ್. ವಿ ರಾಜು, ಕಿಟ್ಟಿ, ಶಿವಕುಮಾರ್, ರಾಜು, ಕೃಷ್ಣ, ಬಾಬು, ಪುಟ್ಟೇಗೌಡ ಇದ್ದರು.