ಪ್ರಕರಣವೊಂದರಲ್ಲಿ 461 ದಿನ ವಿಳಂಬ ಮಾಡಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಆಕ್ಷೇಪಿಸಿ ಹಣಕಾಸು ಮತ್ತು ವಾಣಿಜ್ಯ ತೆರಿಗೆ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ‘ಸರ್ಕಾರಿ ಅಧಿಕಾರಿಗಳು ಸೋಮಾರಿಗಳಾಗಿದ್ದಾರೆ. ಸಂಬಳ ಪಡೆದು ಕೆಲಸ ಮಾಡದ ಅಸಮರ್ಥರು ಜಾಸ್ತಿ ಆಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.