‘ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಹೋರಾಟ ನಡೆಸುತ್ತಿರುವ ಮಠಾಧೀಶರು ಯಾವುದೇ ಆಮಿಷಕ್ಕೆ ಒಳಗಾಗಿಲ್ಲ. ಆಮಿಷಕ್ಕೆ ಒಳಗಾಗಿ ಹೋರಾಟದಿಂದ ಹಿಂದೆ ಸರಿದರೆ, ಮುಂದಿನ ತಲೆಮಾರು ನಮ್ಮನ್ನು ಕ್ಷಮಿಸುವುದಿಲ್ಲ. ಇದು ನಮ್ಮ ಬದುಕಿನ ಹೋರಾಟ. ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅಖಿಲ ಭಾರತ ಲಿಂಗಾಯತ ಮಹಾಸಭಾ ಘೋಷಣೆ ಆಗಬೇಕು, ಲಿಂಗಾಯತರು ಇಲಿಮರಿಗಳಲ್ಲ, ಹುಲಿಮರಿಗಳು ಎನ್ನುವುದನ್ನು ಸಾಬೀತುಪಡಿಸಬೇಕು’ ಎಂದರು.