ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸ್ಥಾಪಿಸಲಾಗಿರುವ ನ್ಯಾಯಾಲಯದಲ್ಲಿ ಗುರುವಾರ ಅಂತಿಮ ವಿಚಾರಣೆ ನಡೆಯಿತು. ಆರೋಪಿಗಳ ಪರ ವಕೀಲರು, ‘ನನ್ನ ಕಕ್ಷಿದಾರರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು’ ಎಂದು ಕೋರಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ಪಾಟೀಲ, ‘ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಮನವಿ ಮಾಡಿದರು.