ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಜೆ.ಶ್ರಿನಿವಾಸನ್ ಮಾತನಾಡಿ, ‘ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಯ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೆ ಶೈತ್ಯಾಗಾರದಲ್ಲಿ ಇಟ್ಟುಕೊಂಡಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಎಚ್.ಆಂಜನೇಯ ಅವರಿಗೆ ವರದಿ ಬಹಿರಂಗಪಡಿಸುವ ಇಚ್ಛಾಶಕ್ತಿ ಅಥವಾ ಧೈರ್ಯ ಇಲ್ಲವೇ’ ಎಂದು ಪ್ರಶ್ನಿಸಿದರು.