ಬೆಂಗಳೂರಿನ ಸಂಕೇತ್ಗೌಡ, ಸೂರಜ್, ದೀವಿತ್, ವಿನೋದ್ ಹಾಗೂ ತಾಲ್ಲೂಕಿನ ಚಿಕ್ಕಕಲವತ್ತಿ ಗ್ರಾಮದ ಬೆಟಗಿರಿ ಗಿರೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಡಿವೈಎಸ್ಪಿ ಸುಧಾಕರ್ನಾಯ್ಕ್ ನೇತೃತ್ವದ ತಂಡ ದಾಳಿ ನಡೆಸಿ ₹ 14,500 ಮೌಲ್ಯದ ಗಾಂಜಾ, ಮೊಬೈಲ್ ಹಾಗೂ ಕಾರನ್ನು ವಶಪಡಿಸಿಕೊಂಡಿದೆ. ಆರೋಪಿಗಳಲ್ಲಿ ಎಂಜಿನಿಯರ್ ವ್ಯಾಸಂಗ ಮಾಡುತ್ತಿರುವವರು ಹಾಗೂ ಎಂಜಿನಿಯರಿಂಗ್ ಪದವಿ ಪಡೆದವರು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.