‘ದೇಶದ ತುಂಬಾ ಸ್ವಚ್ಛ ಭಾರತದ ಕೂಗು ಕೇಳಿ ಬರುತ್ತಿರುವ ಹೊತ್ತಿನಲ್ಲಿ ನಮ್ಮೂರು ದಿನೇ ದಿನೇ ಗಲೀಜಾಗುತ್ತಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಎಲ್ಲಿ ನೋಡಿದರೂ ಕಾಣುವ ಕಸ ಜನರಲ್ಲಿ ಕಸಿವಿಸಿ ಹುಟ್ಟಿಸುತ್ತಿದೆ. ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಇಲ್ಲಿ ಕಸ ಸುರಿಯುವುದಕ್ಕೆ ಕಡಿವಾಣ ಹಾಕಬೇಕು’ ಎಂದು ಸ್ಥಳೀಯ ನಿವಾಸಿ ನರಸಿಂಹಪ್ಪ ಆಗ್ರಹಿಸಿದರು.