ನಾರಾವಿ, ಕುತ್ಲೂರು, ದಿಡುಪೆ, ನಾವೂರು, ಸುಲ್ಕೇರಿ ಗ್ರಾಮಗಳು ನಕ್ಸಲ್ ಪೀಡಿತ ಪ್ರದೇಶದಲ್ಲಿರುವುದರಿಂದ ನಕ್ಸಲ್ ನಿಗ್ರಹ ಪಡೆಯವರು ಕೂಂಬಿಂಗ್ ನಡೆಸುತ್ತಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಬರುವ ಹಿನ್ನಲೆಯಲ್ಲಿ ಉಜಿರೆಯಲ್ಲಿ ತಂಗಿದ್ದು, ಬಂದೋಬಸ್ತ್ ವ್ಯವಸ್ಥೆಗೆ ನಿರ್ದೇಶನವನ್ನು ಅಧಿಕಾರಿಗಳು ನೀಡುತ್ತಿದ್ದಾರೆ.