ಮಾಗಡಿ: ತುಮಕೂರಿನಿಂದ ಮಾಗಡಿ ಮಾರ್ಗವಾಗಿ ಧರ್ಮಪುರಿಗೆ ಹೋಗುವ ಪವರ್ ಗ್ರಿಡ್ 765 ಕೆ.ವಿ.ವಿದ್ಯುತ್ ಲೈನ್ ಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡುವಂತೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಆಗ್ರಹಿಸಿದ್ದಾರೆ.
ಪವರ್ ಗ್ರಿಡ್ 765 ಕೆ.ವಿ. ವಿದ್ಯುತ್ ಲೈನ್ ಎಂಜಿನಿಯರ್ಗಳು ಜಮೀನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಹಾಗೂ ಇತರರು ಪೊಲೀಸ್ ಠಾಣಿಗೆ ಹಾಗೂ ತಹಶೀಲ್ದಾರ್ ಎನ್.ಕೆ.ಲಕ್ಷ್ಮೀಸಾಗರ್ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದರು.
ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಲಕ್ಷ್ಮೀಸಾಗರ್ ಅವರು, ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಎಂಜಿನಿಯರ್ಗೆ ಸೂಚಿಸಿದರು. ಪರಿಹಾರ ನೀಡಲು ವಿಳಂಬ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘದ ಮುಖಂಡರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.