ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಲೈನ್‌ಗೆ ಭೂಮಿ: ಪರಿಹಾರ ನೀಡಲು ರೈತರ ಆಗ್ರಹ

Last Updated 27 ಅಕ್ಟೋಬರ್ 2017, 9:10 IST
ಅಕ್ಷರ ಗಾತ್ರ

ಮಾಗಡಿ: ತುಮಕೂರಿನಿಂದ ಮಾಗಡಿ ಮಾರ್ಗವಾಗಿ ಧರ್ಮಪುರಿಗೆ ಹೋಗುವ ಪವರ್ ಗ್ರಿಡ್ 765 ಕೆ.ವಿ.ವಿದ್ಯುತ್ ಲೈನ್ ಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡುವಂತೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಆಗ್ರಹಿಸಿದ್ದಾರೆ.

ಪವರ್ ಗ್ರಿಡ್ 765 ಕೆ.ವಿ. ವಿದ್ಯುತ್ ಲೈನ್ ಎಂಜಿನಿಯರ್‌ಗಳು ಜಮೀನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಹಾಗೂ ಇತರರು ಪೊಲೀಸ್ ಠಾಣಿಗೆ ಹಾಗೂ ತಹಶೀಲ್ದಾರ್ ಎನ್.ಕೆ.ಲಕ್ಷ್ಮೀಸಾಗರ್‌ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದರು.

ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಲಕ್ಷ್ಮೀಸಾಗರ್ ಅವರು, ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಎಂಜಿನಿಯರ್‌ಗೆ ಸೂಚಿಸಿದರು. ಪರಿಹಾರ ನೀಡಲು ವಿಳಂಬ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘದ ಮುಖಂಡರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT