ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಸರಿ ಶಾಲು ಹೊದಿಸಿ ಟೀಂ ಇಂಡಿಯಾ – ಕಿವೀಸ್‌ ಆಟಗಾರರಿಗೆ ಅದ್ದೂರಿ ಸ್ವಾಗತ

Last Updated 27 ಅಕ್ಟೋಬರ್ 2017, 14:32 IST
ಅಕ್ಷರ ಗಾತ್ರ

ಕಾನ್ಪುರ: ಇಲ್ಲಿನ ಗ್ರೀನ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ಭಾರತ –ನ್ಯೂಜಿಲೆಂಡ್‌ ನಡುವಣ ಮೂರನೇ ಏಕದಿನ ಕ್ರಿಕೆಟ್‌ ಪಂದ್ಯ ಭಾನುವಾರ ನಡೆಯಲಿದ್ದು, ಉಭಯ ತಂಡದ ಆಟಗಾರರು ಕಾನ್ಪುರಕ್ಕೆ ಬಂದಿಳಿದರು. ಇದೇ ವೇಳೆ, ಉಭಯ ತಂಡದ ಆಟಗಾರರನ್ನು ಕೇಸರಿ ಶಾಲು ಹೊದಿಸಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

2016ರಲ್ಲಿ ಉಭಯ ತಂಡಗಳ ನಡುವೆ ಇದೇ ಕ್ರೀಡಾಂಗಣದಲ್ಲಿ ಟೆಸ್ಟ್‌ ಪಂದ್ಯ ನಡೆದಿತ್ತು. ಭಾರತ ಆಡಿದ 500ನೇ ಟೆಸ್ಟ್‌ ಪಂದ್ಯ ಇದಾಗಿತ್ತು.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ 1–1ರಲ್ಲಿ ಸಮಬಲ ಸಾಧಿಸಿವೆ.

ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 6 ವಿಕೆಟ್‌ ಜಯ ಸಾಧಿಸಿತ್ತು.

ಪುಣೆಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಭಾರತ 6 ವಿಕೆಟ್‌ ಜಯ ಸಾಧಿಸಿತ್ತು.

ಸರಣಿ ಮೇಲೆ ಕಣ್ಣಿಟ್ಟಿರುವ ಉಭಯ ತಂಡಗಳಿಗೆ ಭಾನುವಾರ ನಡೆಯುವ ಮೂರನೇ ಏಕದಿನ ಪಂದ್ಯ ಮಹತ್ವದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT