‘ಮುಂಬೈ, ಪುಣೆ, ಕೋಲ್ಕತ್ತ, ಬೆಂಗಳೂರು ಮತ್ತಿತರ ಸ್ಥಳಗಳಲ್ಲಿ ಸಂಚರಿಸಿ ಪೂರ್ಣ ಮಾಹಿತಿಯನ್ನು ಕಲೆಹಾಕಿದ್ದೆ. ಆದಾಯ ತೆರಿಗೆ, ಪೊಲೀಸ್ ಹಾಗೂ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಒದಗಿಸಿದ್ದೆ. ತೆಲಗಿ ಸಾವನ್ನು ನೆಪ ಮಾಡಿಕೊಂಡು, ಪ್ರಕರಣದ ತನಿಖೆಯನ್ನು ಇಲ್ಲಿಗೇ ಕೈಬಿಡಬಾರದು. ಆಳವಾಗಿ ತನಿಖೆ ಮಾಡಿ, ಹಗರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಪತ್ತೆ ಹಚ್ಚಿ, ಶಿಕ್ಷೆಗೆ ಗುರಿಪಡಿಸಬೇಕು’ ಎಂದು ಅವರು ಒತ್ತಾಯಿಸಿದರು.