ಕಳೆದ ವರ್ಷ ಜುಲೈ 11ರಂದು ರಾಷ್ಟ್ರಮಟ್ಟದ ಪತ್ರಿಕೆಯೊಂದರಲ್ಲಿ ದುಷ್ಕರ್ಮಿಗಳು ಜನರನ್ನು ತಪ್ಪುದಾರಿಗೆ ಎಳೆಯುವ ಜಾಹೀರಾತು ನೀಡಿದ್ದರು. www.satyamgroup.orgನಲ್ಲಿ 12 ಗಂಟೆಯೊಳಗೆ ಅರ್ಜಿ ಸಲ್ಲಿಸಿದರೆ ಪ್ರಧಾನಮಂತ್ರಿ ಜನ್ ಕಲ್ಯಾಣ್ ಯೋಜನೆಯ ಅಡಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು, ಸಾಲಕ್ಕೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ ಮತ್ತು ಜಾಮೀನುದಾರರ ಅಗತ್ಯವೂ ಇಲ್ಲ ಎಂದು ತಿಳಿಸಲಾಗಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.