ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ಮಾತನಾಡಿ, ‘ಕೊಡಗು, ಚಿಕ್ಕಮಗಳೂರು ಮತ್ತು ಸಕಲೇಶಪುರಗಳಲ್ಲಿನ ಕಾಫಿ ಮತ್ತು ಕಾಳುಮೆಣಸು ಬೆಳೆಗಾರರ ಹಿತಾಸಕ್ತಿಗೆ ಅನುಗುಣವಾಗಿನೀತಿ–ನಿಯಮ ರೂಪಿಸುತ್ತಿದ್ದೇವೆ. ಕೊಡಗಿನಲ್ಲಿ ರೈಲು ಮಾರ್ಗ ನಿರ್ಮಿಸದಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ’ ಎಂದರು.