‘ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರ ₹ 90 ಕೋಟಿ ನೀಡಿತ್ತು. ಆದರೆ, ಉನ್ನತ ಶಿಕ್ಷಣ ಪರಿಷತ್ತು, ಸಚಿವ ಸಂಪುಟದ ಒಪ್ಪಿಗೆ ಇಲ್ಲದೆ ಕಟ್ಟಡದ ಕಾಮಗಾರಿಗಳ ವೆಚ್ಚವನ್ನು ₹ 149 ಕೋಟಿಗೆ ಹೆಚ್ಚಿಸಿ ಕರ್ನಾಟಕ ಗೃಹ ಮಂಡಳಿಗೆ ವಹಿಸಲು ಅನುಮೋದನೆ ನೀಡಿದೆ. ಅಲ್ಲದೆ, ₹ 190 ಕೋಟಿಗೆ ಅಂದಾಜು ಪಟ್ಟಿ ತಯಾರಿಸಲಾಗಿದೆ. ಇಡೀ ಅಕ್ರಮ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ನಿರ್ದೇಶನದ ಮೇರೆಗೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸದಿದ್ದರೆ ನೂರಾರು ಕೋಟಿ ರೂಪಾಯಿ ಲೂಟಿಗೆ ಅವಕಾಶ ನೀಡಿದಂತಾಗುತ್ತದೆ’ ಎಂದು ಅವರು ಶುಕ್ರವಾರ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಸಿದರು.