'ತೆಲಗಿ ಸಾವಿನ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಶುಕ್ರವಾರ ಅಸಹಜ ಸಾವು ಪ್ರಕರಣ ದಾಖಲಿಸಲಾಯಿತು. ಸಂಜೆ 4.30ರ ಸುಮಾರಿಗೆ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಹತ್ತಿಕಾಳು ಪ್ರಭುಸಿದ್ದಪ್ಪ ಅವರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಿ, 6 ಗಂಟೆ ಸುಮಾರಿಗೆ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.