ಮುಂಡರಗಿ: ‘ಭಾರಿ ಮಳೆಯಾಗಿದ್ದರಿಂದ ತಾಲ್ಲೂಕಿನ ಕೊರ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆ ಹಾಗೂ ಎಂ.ಸಿ.ಎಸ್. ಶಾಲೆ ಆವರಣ ಕೆಸರು ಗದ್ದೆಯಂತಾಗಿದೆ. ಶಾಲಾ ಆವರಣದಲ್ಲಿ ಮಣ್ಣು ಹಾಕಿಸಿ, ನೀರು ಇಂಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಎ.ಪಿ.ಎಂ.ಸಿ ಸದಸ್ಯ ರವೀಂದ್ರ ಉಪ್ಪಿನಬೆಟಗೇರಿ ಒತ್ತಾಯಿಸಿದರು.