ತಾಲ್ಲೂಕಿನ ಕೆ.ಹೊಸಕೋಟೆ ಹಾಗೂ ಕುಂದೂರು ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆ ದಾಂದಲೆಯಿಂದ ಬೆಳೆ ಹಾನಿಯನ್ನು ಈಚೆಗೆ ಪರಿಶೀಲಿಸಿ ಮಾತನಾಡಿದರು. ದೊಡ್ಡ ಬೆಟ್ಟ ಸುತ್ತಲ ಹಳ್ಳಿಗಳಾದ ಕಣಿವೆ ಬಸವನಹಳ್ಳಿ, ಅಡಿ ಬೈಲು ಕಾಣಿಗೆರೆ ವ್ಯಾಪ್ತಿಯಲ್ಲಿ ಆನೆ ದಾಂದಲೆ ಹೆಚ್ಚಿದೆ. ಅರಣ್ಯ ಇಲಾಖೆ ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು, ಬೆಳೆ ನಷ್ಟ ಪರಿಹಾರ ತುಂಬಿಕೊಡಬೇಕು ಎಂದು ಒತ್ತಾಯಿಸಿದರು.