ಚನ್ನರಾಯಪಟ್ಟಣ: ‘ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದ ವಿಧಾನ ಪರಿಷತ್ತು ಸದಸ್ಯ ಎಂ.ಎ. ಗೋಪಾಲಸ್ವಾಮಿ ಹೇಳಿದರು. ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಈಚೆಗೆ ಹೊಯ್ಸಳ ಯುವಕ ಸಂಘ ಏರ್ಪಡಿಸಿದ್ದ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೀರಾವರಿ ಯೋಜನೆ ಜಾರಿಯಿಂದ ಈ ಭಾಗದ16 ಕೆರೆಗಳಿಗೆ ನೀರು ತುಂಬಿಸಲಿದ್ದು, ಅಂತರ್ಜಲ ವೃದ್ಧಿ, ನೀರು ಕಲ್ಪಿಸಲು ಅನುಕೂಲ ಎಂದರು.