ಹುಸಿಯಾದ ಭರವಸೆ: ‘ದುರಂತದಲ್ಲಿ ಶ್ರೀನಾಥ ಗೋವೇಕರ ದಂಪತಿ ಮೃತಪಟ್ಟು, ಅವರ ಮೂವರು ಪುತ್ರಿಯರು ಬದುಕುಳಿದಿದ್ದರು. ಸಂಸದ ಅನಂತಕುಮಾರ್ ಹೆಗಡೆ ಅವರು ತಮ್ಮ ಕದಂಬ ಚಾರಿಟೆಬಲ್ ಟ್ರಸ್ಟ್ ಮೂಲಕ ಅವರನ್ನು ದತ್ತು ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಆದರೆ ಅದು ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೋಮು ಸೌಹಾರ್ದ ಹಾಳುಗೆಡುವಂಥ ಉದ್ರೇಕಕಾರಿ ಭಾಷಣಗಳನ್ನು ಮಾಡುವುದನ್ನು ನಿಲ್ಲಿಸಿ, ಅವರು ಹೇಳಿದ ಮಾತನ್ನು ಉಳಿಸಿಕೊಳ್ಳಬೇಕು’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದರು.