ಈ ಕುರಿತು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಪ್ರಾಂಶುಪಾಲರಾದ ಪ್ರೀತಿ ಎಸ್. ದೇಸಾಯಿ, ‘ಗೋಪ್ಯತೆ ಹಕ್ಕು ಮೂಲಭೂತ ಹಕ್ಕು ಹೌದು ಅಲ್ಲವೊ ಎಂಬ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಆ ಕುರಿತು ಚರ್ಚಿಸುವ ಉದ್ದೇಶದಿಂದ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೇವೆ. ದೇಶದ ವಿವಿಧ ಕಾಲೇಜುಗಳ ಕಾನೂನು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಉತ್ತಮ ಲೇಖನಕ್ಕೆ ಪ್ರಶಸ್ತಿ ನೀಡುತ್ತೇವೆ’ ಎಂದರು.