ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ಮಾತನಾಡಿ, ‘ನೌಕರರ ವೇತನ ಸೌಲಭ್ಯಗಳ ಪರಿಷ್ಕರಣೆಗಾಗಿ 6ನೇ ವೇತನ ಆಯೋಗವನ್ನು ರಚಿಸಿದ್ದ ಸರ್ಕಾರ, 4 ತಿಂಗಳಿನಲ್ಲಿ ವರದಿ ನೀಡುವಂತೆ ಸೂಚಿಸಿತ್ತು. ಆದರೆ, ಆಯೋಗವು ಹಲವು ಕಾರಣ ನೀಡಿ ಕಾಲಾವಧಿ ವಿಸ್ತರಣೆ ಮಾಡಿಕೊಂಡಿದೆ. ಇದರಿಂದ ನೌಕರರಿಗೆ ಸಿಗಬೇಕಾಗಿದ್ದ ವೇತನ ಮತ್ತು ಇತರೆ ಭತ್ಯೆಗಳು ಸಕಾಲಕ್ಕೆ ಸಿಗುತ್ತಿಲ್ಲ’ ಎಂದು ಹೇಳಿದರು.