ತಬ್ರೇಜ್ ಹಾಗೂ ಅರುಣ್ನನ್ನು ಇತ್ತೀಚೆಗೆ ಬಂಧಿಸಿದ್ದ ಜಯನಗರ ಪೊಲೀಸರು, ₹ 35 ಲಕ್ಷ ಮೌಲ್ಯದ 1 ಕೆ.ಜಿ 177 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದರು. ವಿಚಾರಣೆಗೆ ಒಳಪಡಿಸಿದಾಗ ಜಯನಗರ ಠಾಣೆಯೊಂದರ ವ್ಯಾಪ್ತಿಯಲ್ಲೇ ಇವರು 29 ಮಹಿಳೆಯರ ಸರ ಕಿತ್ತಿರುವುದು ಗೊತ್ತಾಗಿತ್ತು. ಹೀಗಾಗಿ, ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರು ಗ್ಯಾಂಗ್ನ ಮುಖ್ಯಸ್ಥ ತಬ್ರೇಜ್ ವಿರುದ್ಧ ಗೂಂಡಾ ಕಾಯ್ದೆ ಅಸ್ತ್ರ ಬಳಸಿ ಇದೇ 27ರಂದು (ಶುಕ್ರವಾರ) ಆದೇಶ ಹೊರಡಿಸಿದ್ದಾರೆ.