‘ಗ್ರಾಮದಲ್ಲಿ ಸರಿಯಾದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲವಾಗಿದೆ. ಎಲ್ಲೆಡೆ ಅಸ್ವಚ್ಛತೆ ರಾರಾಜಿಸುತ್ತಾ ಊರು ತುಂಬೆಲ್ಲಾ ದುರ್ಗಂಧದ ವಾಸನೆ ಬರುತ್ತದೆ. ಗ್ರಾಮದಲ್ಲಿ ಶೌಚಾಲಯ ಇದ್ದರೂ ಉಪಯೋಗಕ್ಕೆ ಬರುತ್ತಿಲ್ಲ. ಬೀದಿ ದೀಪಗಳ ವ್ಯವಸ್ಥೆ ಇಲ್ಲವಾಗಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಕಾರ್ಮಿಕರಿಗೆ, ಬಡವರಿಗೆ ಕೆಲಸ ನೀಡುತ್ತಿಲ್ಲ. ಡಾ.ಬಾಬು ಜಗಜೀವನರಾಂ ಮತ್ತು ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿವೆ’ ಎಂದು ತಿಳಿಸಿದ್ದಾರೆ.