ಸಂಸದ ಎಂ. ವೀರಪ್ಪ ಮೊಯಿಲಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪ್ರಣಾಳಿಕೆ ಸಮಿತಿ ಸಭೆ ಭಾನುವಾರ ನಡೆಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ, ದಿನೇಶ್ ಗುಂಡೂರಾವ್, ಸಚಿವರಾದ ಎಚ್.ಕೆ. ಪಾಟೀಲ, ಡಿ.ಕೆ. ಶಿವಕುಮಾರ್, ಮಾರ್ಗರೇಟ್ ಆಳ್ವ ಸಭೆಯಲ್ಲಿ ಪಾಲ್ಗೊಂಡಿದ್ದರು. ಐದು ತಂಡಗಳನ್ನು ರಚಿಸಲು ಸಭೆ ನಿರ್ಧರಿಸಿದೆ.