‘ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರಿಗೆ ಭಾನುವಾರ ಕರೆ ಮಾಡಿದ ರಾಹುಲ್ ಗಾಂಧಿ, 21 ಮತ್ತು 22ರಂದು ರಾಜ್ಯಕ್ಕೆ ಭೇಟಿ ನೀಡಲು ಸಿದ್ಧ. ಕಾರ್ಯಕ್ರಮ ಮರು ಹೊಂದಾಣಿಕೆ ಮಾಡಬಹುದೇ ಎಂಬ ಬಗ್ಗೆ ತಿಳಿಸಿ ಎಂದು ಸೂಚಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ‘ಕೆಪಿಸಿಸಿ ಅಧ್ಯಕ್ಷರಾಗಿ ಏಳು ವರ್ಷ ಪೂರೈಸಿರುವ ಪರಮೇಶ್ವರಗೆ ಅಭಿನಂದನೆ ಹೇಳಿದ ರಾಹುಲ್, ನಿಮ್ಮ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರ ತರಲು ಶ್ರಮಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದರು’ ಎಂದು ಮೂಲಗಳು ತಿಳಿಸಿವೆ.