ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿದಂಬರಂ ಹೇಳಿಕೆಗೆ ಸಚಿವರ ತಿರುಗೇಟು

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಇಂದಿನ ಸ್ಥಿತಿಗೆ ಹಿಂದಿನ ಯುಪಿಎ ಸರ್ಕಾರವೇ ಕಾರಣ ಎಂದಿರುವ ಪ್ರಧಾನ ಮಂತ್ರಿ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್‌ ಅವರು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಅವರ ಹೇಳಿಕೆಗೆ ತಿರುಗೇಟು ನಿಡಿದ್ದಾರೆ.

ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕದ ಕಾರ್ಯಕಾರಿ ಮಂಡಳಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶವನ್ನು 50 ವರ್ಷಗಳ ಕಾಲ ಆಳಿದ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯದ ಒಟ್ಟೂ ಪರಿಸ್ಥಿತಿಯನ್ನು ಇಂದು ಕಾಶ್ಮೀರದಲ್ಲಿ ನಾವು ಎದುರಿಸಬೇಕಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಸ್ವಾಯತ್ತತೆ ನೀಡುವಂತೆ ಗೃಹ ಖಾತೆಯ ಮಾಜಿ ಸಚಿವರು ಉಪದೇಶ ಮಾಡಿದ್ದನ್ನು ರಾಷ್ಟ್ರ ಒಪ್ಪಲಾರದು’ ಎಂದು ಸಿಂಗ್‌ ಹೇಳಿದರು.

‘ಕಾಶ್ಮೀರ ಕಣಿವೆಯ ಜನತೆ ಹೆಚ್ಚಿನ ಸ್ವಾಯತ್ತತೆ ಬಯಸುತ್ತಿದ್ದಾರೆ. ನಾನು ನಡೆಸಿದ ಸಂವಾದಗಳಲ್ಲೂ ಈ ಪ್ರಸ್ತಾವ ಕೇಳಿ ಬಂದಿದೆ. ಎಲ್ಲರೂ ಪ್ರತ್ಯೇಕತೆ ಪರವಾಗಿ ಇಲ್ಲ. ಆದರೆ, ಹೆಚ್ಚಿನ ಸವಲತ್ತುಗಳನ್ನು ಒದಗಿಸಬೇಕು’ ಎಂದು ರಾಜಕೋಟ್‌ದಲ್ಲಿ ಚಿದಂಬರಂ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT