ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಎಕರೆ ಕಬ್ಬು ಸಂಪೂರ್ಣ ಭಸ್ಮ

Last Updated 30 ಅಕ್ಟೋಬರ್ 2017, 5:30 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಉಚ್ಚಾ ಗ್ರಾಮದ ರೈತ ವಿದ್ಯಾಸಾಗರ ಬಾಬುರಾವ ಅವರ ಹೊಲದಲ್ಲಿ ಬೆಳೆದ ಕಬ್ಬು ಶನಿವಾರ ಬೆಂಕಿಗೆ ಆಹುತಿಯಾಗಿದೆ. ಹೊಲದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ಕಡಿದು ಬಿದ್ದು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಕಬ್ಬು ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವ ವೇಳೆಗಾಗಲೇ ಬಹುತೇಕ ಬಹುತೇಕ ಕಬ್ಬು ಸುಟ್ಟು ಭಸ್ಮವಾಗಿದೆ.

ರೈತ ವಿದ್ಯಾಸಾಗರ ಬಾಬುರಾವ ಅವರ ಜಮೀನು ಮೂಲಕ ಬ್ಯಾಲಹಳ್ಳಿ ಡಬ್ಲ್ಯು, ವರವಟ್ಟಿ ಗ್ರಾಮದ ಹೊಲಗಳಿಗೆ ಸಂಪರ್ಕ ಕಲ್ಪಿಸುವ ಎಸ್.ಟಿ ಲೈನ್ ಹಾದು ಹೋಗಿದೆ. ತುಂಬಾ ಹಳೆಯದಾಗಿದ್ದ ತಂತಿಗಳು ಬಹು ದಿನಗಳಿಂದ ಸಡಿಲಗೊಂಡಿವೆ. ನಷ್ಟ ಪರಿಹಾರಕ್ಕೆ ಸರ್ಕಾರ ಸಹಾಯ ಮಾಡಬೇಕು ಎಂದು ರೈತ ವಿದ್ಯಾಸಾಗರ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT