ಮೈಸೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ಪಕ್ಷವು ಸಂವಿಧಾನದ ತತ್ವಗಳ ಮೇಲೆ ನಂಬಿಕೆಯಟ್ಟಿದೆ. ಇದ್ದಕ್ಕಿದ್ದಂತೆ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರಿಗೆ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಹೇಳುವುದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಬಿಜೆಪಿಯವರ ಗುಣ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವ್ಯತ್ಯಾಸ ಇದುವೇ ಆಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿಗೆ ಯಾವುದೇ ಸಿದ್ಧಾಂತವಿಲ್ಲ. ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಆಸಕ್ತಿ ಅವರಿಗಿಲ್ಲ. ಬಿಜೆಪಿಯ ಹಿಂದುತ್ವ ಸಿದ್ಧಾಂತವು ಸಂವಿಧಾನ ವಿರೋಧಿ ಎಂದರು.
ಹಳೆಯ ಕೇಸು ಮುಂದುವರಿಸಿದ್ದಾರೆ: ಡಿವೈಎಸ್ಪಿ ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವ ಪ್ರಶ್ನೆಯೇ ಏಳುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.