ಭಾಷೆ, ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ, ಅದರ ವೈವಿಧ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ‘ಜೈಲಿಗೆ ಹೋಗಿ, ಜಾಮೀನಿನ ಮೇಲೆ ಹೊರಬರುವವರಿಗೆ ಹೂಮಾಲೆ ಹಾಕುವವರು ಇರುವಂಥ ಸಮಾಜದಲ್ಲಿ ನಾವಿದ್ದೇವೆ. ಸಮಾಜ ಎತ್ತ ಸಾಗುತ್ತಿದೆ?’ ಎಂದು ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.