ಬೆಂಗಳೂರು: 2017ನೇ ಸಾಲಿನ ‘ಪಂಪ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಪ್ರೊ. ಕೆ.ಎಸ್. ನಿಸಾರ್ ಅಹಮದ್, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಶಿವಮೊಗ್ಗದ ಸ. ಉಷಾ ಅವರನ್ನು ಆಯ್ಕೆ ಮಾಡಲಾಗಿದೆ.
ಎಲ್ಲ ಪ್ರಶಸ್ತಿಗಳು ತಲಾ ₹ 3 ಲಕ್ಷ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಫಲಕ ಹೊಂದಿದೆ.
ಇತರೆ ಪ್ರಶಸ್ತಿ: ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಬಿ.ಎ.ಜಮಾದಾರ (ಸೊಲ್ಲಾಪುರ), ಕನಕಶ್ರೀ ಪ್ರಶಸ್ತಿಗೆ ಡಾ.ಕೆ. ಗೋಕುಲನಾಥ (ಬೆಂಗಳೂರು) ಅವರನ್ನು ಆಯ್ಕೆ ಮಾಡಲಾಗಿದೆ.